ತಾಲ್ಲೂಕಿನ ಅಮ್ಮನಗುಡಿ ಕೊಪ್ಪಲಿನಲ್ಲಿ ರೂ.60 ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ತಾಲ್ಲೂಕಿನ ಎಲ್ಲ ಗ್ರಾಪಂಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅವಧಿ ಮುಗಿದಿದ್ದು ಈಗಾಗಲೇ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು ಅವರು ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳ ಬಗ್ಗೆ ಹೆಚ್ಚಿನ ಒತ್ತು ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿ ನರ್ಮಿಸಲಾಗುವ ಸಿಸಿ ರಸ್ತೆ ಮತ್ತು ಚರಂಡಿ ನರ್ಮಾಣ ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಶಾಸಕರು ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಎಚ್ಚರ ವಹಿಸಲು ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಸರ್ವಜನಿಕರಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಇದ್ದಲ್ಲಿ ನೇರವಾಗಿ ತಮ್ಮನ್ನು ದೂರವಾಣಿ ಮೂಲಕ ಸಂರ್ಕಿಸಿ ದೂರು ನೀಡುವಂತೆ ಸೂಚಿಸಿದರು.
ರಾಮನಾಥತುಂಗ ಗ್ರಾಪಂ ವ್ಯಾಪ್ತಿಯಲ್ಲಿ ಈ ಹಿಂದೆ ಆಡಳಿತ ನಡೆಸಿದ ಜನಪ್ರತಿನಿಧಿಗಳು ಮನೆ ಮಂಜೂರಾತಿ ಮಾಡಿದ್ದ ಫಲಾನುಭವಿಗಳಿಗೆ ರ್ಕಾರದ ಹಣ ಸರ್ಪಕವಾಗಿ ತಲುಪಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು ಈ ಬಗ್ಗೆ ತಾಪಂ ಇಒ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕರ್ಯಕ್ರಮದಲ್ಲಿ ತಾಪಂ ಸದಸ್ಯರಾದ ಎಸ್.ರಾಮು ಮತ್ತು ಆರ್.ಎಸ್.ಮಹದೇವ್ ಮಾತನಾಡಿದರು.
ಈ ಸಂರ್ಭದಲ್ಲಿ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ
ಎ.ಟಿ.ರಂಗಸ್ವಾಮಿ, ತಾಪಂ ಇಒ ಡಿ.ಸಿ.ಶ್ರುತಿ, ಲೋಕೋಪಯೋಗಿ ಇಲಾಖೆಯ ಎಇಇ ನಾಗರಾಜ್, ಮುಖಂಡರಾದ ಶಿವಣ್ಣ, ಬೋರೇಗೌಡ, ರಾಜೇಶ್, ಕೆಂಪೇಗೌಡ, ಮಹೇಂದ್ರ, ಪುಟ್ಟೇಗೌಡ, ಸಗೀರ್ ಅಹಮದ್ ಸೇರಿದಂತೆ ಮತ್ತಿತರರು ಹಾಜರಿದ್ದರು.