ತಾಲೂಕಿನ ಬೆಟ್ಟದಪುರ, ಹಿಟ್ನಳ್ಳಿ, ಚಿಕ್ಕಮಾಗಳಿ, ಮಾಗಳಿ, ಮುತ್ತೂರು ಗ್ರಾಮಗಳಲ್ಲಿನ ಸರ್ಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣದ 97.50ಲಕ್ಷ ವೆಚ್ಚದ ಕಾಮಗಾರಿ ಮತ್ತು ವಿವಿಧೆಡೆ 54ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಒಟ್ಟು 1.51ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು, ಶೈಕ್ಷಣಿಕ ಪ್ರಗತಿಯಲ್ಲಿ ತಾಲೂಕು ಉತ್ತಮ ಸಾಧನೆ ತೋರುತ್ತಿದ್ದು ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸುವುದರ ಮೂಲಕ ಸತತ 7ನೇ ಬಾರಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವುದು ಶ್ಲಾಘನೀಯ, ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲೆಂದು ಸರ್ಕಾರ ಹಲವು ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದು ಅವುಗಳ ಸದ್ಬಳಕೆಯಾಗಬೇಕಿದೆ, ಈಗಾಗಲೇ ತಾಲೂಕಿನ ವಿವಿಧೆಡೆ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳ ನೂತನ ಕೊಠಡಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ ಕಟ್ಟಡಗಳು ದೀರ್ಘಕಾಲ ಸುಸ್ಥಿತಿಯಲ್ಲಿರುವಂತೆ ಕೆಲಸ ನಿರ್ವಹಿಸುವಂತೆ ತಿಳಿಸಿದರು.
ಈ ಸಂದರ್ಭ ತಾ.ಪಂ ಇಒ ಡಿ.ಸಿ ಶ್ರುತಿ, ಅಧ್ಯಕ್ಷೆ ಕೆ.ಆರ್ ನಿರೂಪ, ಬಿಇಒ ವೈ.ಕೆ ತಿಮ್ಮೇಗೌಡ, ಪಿಡಬ್ಲ್ಯುಡಿ ಎಇಇ ನಾಗರಾಜ್, ಎಇ ಬೋರೆಗೌಡ, ಕುಮಾರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ಕಂದಾಯಾಧಿಕಾರಿ ಪಾಂಡುರಂಗ, ಗ್ರಾಮೀಣಾಭಿವೃದ್ಧಿ ಮತ್ತು ಶುದ್ಧ ಕುಡಿಯುವ ನೀರು ಇಲಾಖೆ ಎಇಇ ಶಿವಕುಮಾರ್, ಮುಖಂಡರಾದ ಹಿಟ್ನಳ್ಳಿ ಪರಮೇಶ್, ಮಹದೇವ್, ಮಾಗಳಿ ರಾಜು, ಯತೀಶ್, ನವೀನ್, ದೇವರಾಜ್, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.