ಪಿರಿಯಾಪಟ್ಟಣ ತಾಲ್ಲೂಕಿನ ವಿವಿಧಡೆ 2 ಕೋಟಿ 92 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಕೆ ಮಹದೇವ್ ಚಾಲನೆ ನೀಡಿದರು. 10/11/2020

ಸತ್ಯಗಾಲ ಗ್ರಾಮ ಪರಿಮಿತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಂದಾಜು ವೆಚ್ಚ 70 ಲಕ್ಷ, ಹವನೂರು ಗ್ರಾಮ ಪರಿಮಿತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಂದಾಜುವೆಚ್ಚ 60ಲಕ್ಷ, ಹೆಮ್ಮಿಗೆ ಇಂದ ಉಪ್ಪಾರ ಗಿರಿ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಂದಾಜು ವೆಚ್ಚ 1 ಕೋಟಿ 40 ಲಕ್ಷ . ಕೋಗಿಲವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ನಿರ್ಮಾಣಕ್ಕೆ ಅಂದಾಜುವೆಚ್ಚ 22 ಲಕ್ಷ . ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು ಕೋವಿಡ್ 19 ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಾಲೂಕಿನ ಅಭಿವೃದ್ಧಿಯ ಕನಸು ಕಂಡಿದ್ದು ನನ್ನ ಅಧಿಕಾರದ ಅವಧಿಯಲ್ಲಿ ಸರ್ಕಾರದಿಂದ ಅನುದಾನ ತಂದು ತಾಲೂಕಿನ ಎಲ್ಲಾ ಗ್ರಾಮಗಳ ಅಭಿವೃದ್ಧಿಯನ್ನು ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಕೆ ಮಹದೇವ್ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಈರಯ್ಯ ಮಂಜುಳಾ ಅಪೂರ್ವ ಮೋಹನ್ ರವಿ ಶಂಕರೇಗೌಡ ಶಾಂತಪ್ಪ ಕೃಷ್ಣ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು

Leave a Comment

Your email address will not be published. Required fields are marked *

error: Content is protected !!
Scroll to Top