ಸೋಂಕು ಹತೋಟಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರವರು ಆನ್ಲೈನ್ ಸಮಾಲೋಚನೆ ನಡೆಸಿದರು 17/05/2021

ರಾಜ್ಯದ ಕೋವಿಡ್ ಸ್ಥಿತಿಗತಿ ಮತ್ತು ಜೆಡಿಎಸ್ ವತಿಯಿಂದ ಜನರಿಗೆ ನೀಡಲಾಗುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪಕ್ಷದ ಶಾಸಕರು ಮುಖಂಡರೊಂದಿಗೆ ಆನ್ಲೈನ್ ಸಮಾಲೋಚನೆ ನಡೆಸಿದರು. ಕೊರೋನ ವೈರಸ್ ಸೋಂಕು ಪತ್ತೆ ಪರೀಕ್ಷೆ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು ಪರೀಕ್ಷೆಯ ವರದಿಗಳು ವಿಳಂಬವಾಗಿ ಬರುತ್ತಿರುವುದು ಮತ್ತು ವರದಿ ವಿಳಂಬವಾಗುತ್ತಿರುವುದರಿಂದ ಆಗುತ್ತಿರುವ ಅನಾಹುತಗಳು ಲಸಿಕೆ ಅಭಿಯಾನ ಅವ್ಯವಸ್ಥೆ ಆಕ್ಸಿಜನ್ ಪೂರೈಕೆಯಲ್ಲಿ ಆಗುತ್ತಿರುವ ಸಮಸ್ಯೆ ತಾರತಮ್ಯ ಆಸ್ಪತ್ರೆಗಳು ರೋಗಿಗಳಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿರುವುದನ್ನು ಶಾಸಕರು ಕುಮಾರಸ್ವಾಮಿ ಅವರ ಗಮನಕ್ಕೆ ತಂದರು ವಿಚಾರವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಕುಮಾರಸ್ವಾಮಿ ಅವರು ಭರವಸೆ ನೀಡಿದರು. ಹಳ್ಳಿಗಳಲ್ಲಿ ಸೋಂಕಿಗೆ ಒಳಗಾಗಿ ಇರುವವರಿಗೆ ಮಾಹಿತಿ ಜಾಗೃತಿ ನೀಡಲು ಆಶಾ ಕಾರ್ಯಕರ್ತೆಯರು ಶ್ರಮವಹಿಸಿ ತ್ತಿರುವುದಾಗಿ ಶಾಸಕರು ಮಾಹಿತಿ ನೀಡಿದರು ಆಶಾ ಕಾರ್ಯಕರ್ತರ ಕಾರ್ಯಕ್ಕೆ ಹೆಚ್ ಡಿ ಕುಮಾರಸ್ವಾಮಿ ರವರು ಹರ್ಷವ್ಯಕ್ತಪಡಿಸಿದರು ಕಾರ್ಯಕರ್ತೆಯರು ಸೋಂಕಿಗೆ ಔಷಧ ತಲುಪಿಸಲು ಉತ್ಸುಕರಾಗಿದ್ದರು ಸರ್ಕಾರ ಔಷಧ ಪೂರೈಸದೆ ಇರುವುದನ್ನು ಅಶ್ವಿನ್ ಅವರು ಸಭೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರ ಗಮನಕ್ಕೆ ತಂದರು. ಕೋವಿಡ್ ಚಿಕಿತ್ಸೆಗೆ ನೆರವಾಗುತ್ತಿರುವ ವೈಯಕ್ತಿಕ ಸಹಾಯ ನೀಡುತ್ತಿರುವ ಪಕ್ಷದ ಶಾಸಕರ ನಡೆಗೆ ಕುಮಾರಸ್ವಾಮಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.

2ಡಿಜಿ ಔಷಧ ಖರೀದಿಸಿ ಹಂಚಲು ಚಿಂತನೆ

ಡಿ ಆರ್ ಡಿ ಓ ಅಭಿವೃದ್ಧಿಪಡಿಸಿರುವ 2ಡಿಜಿ ಔಷಧದ ಪೊಟ್ಟಣಗಳನ್ನು ಖರೀದಿ ಮಾಡಿ ರಾಜ್ಯದ್ಯಂತ ಜೆಡಿಎಸ್ ವತಿಯಿಂದ ಉಚಿತವಾಗಿ ವಿತರಿಸುವ ಬಗ್ಗೆ ಆನ್ಲೈನ್ ಸಭೆಯಲ್ಲಿ ಸಮಾಲೋಚನೆ ನಡೆಯಿತು ಔಷಧ ಪರಿಣಾಮಕಾರಿ ಎಂದು ಕಂಡುಬಂದರೆ ಅದನ್ನು ಖರೀದಿಸಿ ಹಂಚಲು ನಿರ್ಧರಿಸಲಾಯಿತು ಹೆಚ್ ಡಿ ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ಶಾಸಕರು ಮುಖಂಡರು ಹರ್ಷ ವ್ಯಕ್ತಪಡಿಸಿದರು ಪ್ರಶಂಸಿದರು

ಪಡಿತರ ಸಮಸ್ಯೆಗೆ ಶಾಸಕರ ಆಕ್ರೋಶ
ಪಡಿತರ ತೆಗೆದುಕೊಳ್ಳಲು ತಮ್ ಇಂಪ್ರೆಷನ್ ರದ್ದುಮಾಡಿ ಆಧಾರ್ ಕಡ್ಡಾಯ ಗೋಳಿಸಿರುವುದನ್ನು ಬಹುತೇಕ ಶಾಸಕರು ವಿರೋಧಿಸಿದರು ಆಧಾರ್ ಲಿಂಕ್ ಆಗದೆ ಪಡಿತರ ಸಿಗದೇ ಜನ ಪರದಾಡುತ್ತಿದ್ದಾರೆ ಎಂದು ಶಾಸಕರು ಮುಖಂಡರು ದೂರಿದರು ಮೂಲಕ ಪಡಿತರ ವಿತರಿಸಬೇಕು ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಬೇಕಾಗಿ ಬಹುತೇಕ ಶಾಸಕರು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು. ಸರ್ಕಾರಕ್ಕೆ ಈ ವಿಷಯ ತಲುಪಿಸಿ ಸಮಸ್ಯೆ ಪರಿಹರಿಸುವುದಾಗಿ ಹೆಚ್ ಡಿ ಕೆ ಹೇಳಿದರು.

ದಂಪತಿ ಸಾವಿಗೆ ಹೆಚ್ ಡಿಕೆ ತೀವ್ರ ಬೇಸರ

ನಾಗಮಂಗಲದಲ್ಲಿ ದಂಪತಿ ಕೋವಿಡ್ ನಿಂದ ಸಾವಿಗೀಡಾಗಿದ್ದು ಮಗು ಅನಾಥವಾದ ಬಗ್ಗೆ ಶಾಸಕ ಸುರೇಶಗೌಡ ಅವರಿಂದ ಎಚ್ ಡಿ ಕೆ ಮಾಹಿತಿ ಪಡೆದರು ಸಾವಿಗೆ ತೀವ್ರ ಬೇಸರ ವ್ಯಕ್ತಪಡಿಸಿದರು ದಂಪತಿಗೆ ಆಸ್ಪತ್ರೆ ವ್ಯವಸ್ಥೆ ಮಾಡಿದ್ದು ಚಿಕಿತ್ಸೆ ಕಲ್ಪಿಸಿದ ಪ್ರಯತ್ನಗಳ ಬಗ್ಗೆ ಶಾಸಕ ಸುರೇಶಗೌಡ ವಿವರಿಸಿದರು ಅವರ ಪ್ರಾಣ ಉಳಿಸಲು ಸಾಧ್ಯವಾಗದ್ದಕ್ಕೆ ಶಾಸಕ ಸುರೇಶ್ ಗೌಡ ಮರುಗಿದರು

ಕೋವಿಡ್ ಯುವಕರೇ ಸಾವು, ಸಭೆಯಲ್ಲಿ ತೀವ್ರ ಆತಂಕ

ರಾಜ್ಯಾದ್ಯಂತ ಯುವಕರೇ ಹೆಚ್ಚಾಗಿ ಕೋವಿಡ್ ಗೆ ಬಲಿಯಾಗುತ್ತಿರುವ ಗಂಭೀರ ವಿಚಾರವನ್ನು ಶಾಸಕರು ಕುಮಾರಸ್ವಾಮಿ ಅವರ ಗಮನಕ್ಕೆ ತಂದರು ಯುವಕರೇ ಸಾವಿಗೀಡಾಗುತ್ತಿರುವ ಏಕೆ ಎಂಬುದರ ಕುರಿತು ಸರ್ಕಾರ ಅಧ್ಯಯನ ನಡೆಸುವ ಅಗತ್ಯವಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾದವು ಅಲ್ಲದೆ ಈ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿರುವುದಾಗಿ ಎಚ್ ಡಿ ಕೆ ಅಭಿಪ್ರಾಯಪಟ್ಟರು.

Leave a Comment

Your email address will not be published. Required fields are marked *

error: Content is protected !!
Scroll to Top