MLA K.Mahadev ರವರಿಂದ ವಿವಿಧ ಗ್ರಾಮಗಳಲ್ಲಿ 1.2 ಕೋಟಿ ರೂ ವೆಚ್ಚದ ಚರಂಡಿ ಹಾಗು ರಸ್ತೆ ಕಾಮಗಾರಿಗಳಿಗೆ ಗುದ್ದಲಿಪೂಜೆ 09/02/2022

ತಾಲ್ಲೂಕಿನ ಗಂಗೂರು ಬೋರೆ, ಹಂಡಿತವಳ್ಳಿ, ಎನ್ ಶೆಟ್ಟಿಹಳ್ಳಿ, ನಿಲಂಗಾಲ ಹಾಗು ದೊರೆಕೆರೆ ಗ್ರಾಮಗಳಲ್ಲಿ 1.2 ಕೋಟಿ ರೂ ಅಂದಾಜು ವೆಚ್ಚದಲ್ಲಿ ಪರಿಶಿಷ್ಟ ಜಾತಿ ಕಾಲೊನಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಕೆ ಮಹದೇವ್ ಗುದ್ದಲಿ ಪೂಜೆ ನೆರವೇರಿಸಿದರು ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು ಒಂದೇ ಹಂತದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣವಾಗಿ ನೆರವೇರಿಸಲು ಸಾಧ್ಯವಿಲ್ಲ ಆದ್ದರಿಂದ ಹಣಕಾಸು ವ್ಯವಸ್ಥೆಯನ್ನು ತಿಳಿದು ಹಂತಹಂತವಾಗಿ ಗ್ರಾಮೀಣ ಭಾಗದ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಿ ಇತರೆ ಗ್ರಾಮಗಳಿಗೆ ಮಾದರಿಯಾಗುವಂತೆ ನಾನು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಆದ್ದರಿಂದ ಮುಂದಿನ ಚುನಾವಣೆಯ ಸಂದರ್ಭದಲ್ಲಿಯೂ ಕೂಡ ಅಭಿವೃದ್ಧಿ ಕಾರ್ಯಗಳನ್ನು ಮನದಲ್ಲಿಟ್ಟು ನನಗೆ ಮತವನ್ನು ನೀಡಿ ತಮ್ಮ ಸೇವೆ ಮಾಡಲು ಅವಕಾಶವನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಅಣ್ಣಯ್ಯಶೆಟ್ಟಿ, ತಹಸೀಲ್ದಾರ್ ಕೆ.ಚಂದ್ರಮೌಳಿ, ತಾಲೂಕು ಪಂಚಾಯ್ತಿ ಇಒ ಸಿಆರ್ ಕೃಷ್ಣಕುಮಾರ್, ಪಶುವ್ಯದ್ಯಾಧಿಕಾರಿ ಸೋಮಯ್ಯ, ಹಾಗು ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರು ಇದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top