ಪಿರಿಯಾಪಟ್ಟಣ: ಹಿಂದೂ ಮುಸಲ್ಮಾನರು ಭಾವೈಕ್ಯತೆಯಿಂದ ಬಾಳಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ತಿಳಿಸಿದರು.

ಪಟ್ಟಣದಲ್ಲಿ ನಡೆದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು, ಸರ್ಕಾರ ಅಧಿಕಾರಕ್ಕೆ ತಂದರೆ ಅಚ್ಚೇದಿನ್ ಬರುತ್ತದೆ ಎಂದು ಮೋದಿ ಅಮಿತ್ ಶಾ ಬೊಗಳೆ ಬಿಟ್ಟು ಅಧಿಕಾರಕ್ಕೇರಿದ್ದೆ ಬಿಜೆಪಿ ಪಕ್ಷದ ಸಾಧನೆಯಾಗಿದೆ, ಹಿಂದುತ್ವದಿಂದ ಮಾತ್ರ ಅಭಿವೃದ್ಧಿ ಸಾಧ್ಯವಿಲ್ಲ ಹಿಂದೂ ಮುಸಲ್ಮಾನರು ಒಗ್ಗೂಡಿ ಬಾಳಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ, ತರಕಾರಿ ಗೃಹೋಪಯೋಗಿ ಹಾಗೂ ಅನಿಲ ಸೇರಿದಂತೆ ಇನ್ನಿತರೆ ದಿನಬಳಕೆ ವಸ್ತುಗಳ ಬೆಲೆ ದಿನೇ ದಿನೇ ಏರಿಸಿ ಮಧ್ಯಮ ವರ್ಗದವರು ಬದುಕುವ ಸ್ಥಿತಿ ಶೋಚನೀಯವಾಗಿದೆ, ರಾಷ್ಟ್ರೀಯ ಪಕ್ಷಗಳಿಂದ ಜನಸಾಮಾನ್ಯರ ಅಭಿವೃದ್ಧಿ ಅಸಾಧ್ಯ ಸರ್ವ ಜನಾಂಗದ ಹಿತಕ್ಕಾಗಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ತರಬೇಕಿದೆ, ಕೇಂದ್ರ ಹಾಗೂ ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಬೇಸತ್ತಿರುವ ಮತದಾರ ಮುಂಬರುವ ದಿನಗಳಲ್ಲಿ ಜೆಡಿಎಸ್ ನತ್ತ ಹೆಚ್ಚು ಒಲವು ತೋರಿ ಎಚ್.ಡಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ, ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರ ನೇತೃತ್ವದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ತಿಳಿಸಿ ಕೆ.ಮಹದೇವ್ ಅವರು ಶಾಸಕರಾದ ನಂತರ ತಾಲ್ಲೂಕಿನಲ್ಲಿ ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸಿರುವುದು ಶ್ಲಾಘನೀಯ, 2013 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಪಿರಿಯಾಪಟ್ಟಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗುತ್ತದೆ ಎಂಬ ಆಂತರಿಕ ಸಮೀಕ್ಷೆಯಿಂದ ನಾನು ಕೆ.ವೆಂಕಟೇಶ್ ಪರ ವಾರಗಳ ಕಾಲ ಇಲ್ಲಿ ಪ್ರಚಾರ ಮಾಡಿದ್ದೆ ಆತನಿಗೆ ಜನಸಾಮಾನ್ಯರೊಂದಿಗೆ ಹೇಗೆ ಬೆರೆಯಬೇಕೆಂಬ ಅರಿವಿಲ್ಲ ಎಂದು ಟೀಕಿಸಿ ಮಾಜಿ ಶಾಸಕರಾದ ಕಾಳಮರೀಗೌಡರು ಹಾಗೂ ಚನ್ನಬಸಪ್ಪನವರ ಕಾಲದಿಂದಲೂ ಪಿರಿಯಾಪಟ್ಟಣ ನನಗೆ ಚಿರಪರಿಚಿತ ಎಂದರು.

ಶಾಸಕ ಕೆ.ಮಹದೇವ್ ಅವರು ಮಾತನಾಡಿ ತಾಲ್ಲೂಕಿನಲ್ಲಿ ಸರ್ವಜನಾಂಗದ ಅಭಿವೃದ್ಧಿಗೆ ಒತ್ತು ನೀಡಿ ಪಾರದರ್ಶಕ ಆಡಳಿತ ನಡೆಸುತ್ತಿದ್ದು ನನ್ನ ಗೆಲುವಿನಲ್ಲಿ ಅಲ್ಪಸಂಖ್ಯಾತರ ಪಾತ್ರ ಅಪಾರವಾಗಿದೆ ಎಂದರು.

ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ ಅವರು ಮಾತನಾಡಿ ಹಿಂದು ಮುಸಲ್ಮಾನರು ಭಾವೈಕ್ಯತೆಯಿಂದ ಬಾಳಿದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.

ಜೆಡಿಎಸ್ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಪಿರಿಯಾಪಟ್ಟಣಕ್ಕೆ ಆಗಮಿಸಿದ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಅಲ್ಪಸಂಖ್ಯಾತ ಬಂಧುಗಳು ಅದ್ದೂರಿಯಾಗಿ ವೇದಿಕೆಗೆ ಬರಮಾಡಿಕೊಂಡು ಅವರ ಪರ ಜೈಕಾರ ಕೂಗುತ್ತ ಸನ್ಮಾನಿಸಿದರು.

ಈ ಸಂದರ್ಭ ವಕ್ಫ್ ಬೋರ್ಡ್ ರಾಜ್ಯಾಧ್ಯಕ್ಷ ಶಾಫಿ ಸಅದಿ ಉಸ್ತಾದ್, ಜಿಲ್ಲಾಧ್ಯಕ್ಷ ಫಯಾಜ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಕೆ.ಆರ್ ನಗರದ ಖ್ಯಾತ ಮೂಳೆ ವೈದ್ಯ ಅಲ್ಪಸಂಖ್ಯಾತ ಮುಖಂಡ ಮೆಹಬೂಬ್ ಖಾನ್, ಟಿಎಪಿಸಿಎಂಎಸ್ ಅಧ್ಯಕ್ಷ ದೊರೆಕೆರೆ ನಾಗೇಂದ್ರ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ಪುರಸಭೆ ಅಧ್ಯಕ್ಷ ಕೆ.ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಸಿ ಕೃಷ್ಣ, ಮುಖಂಡರಾದ ಅತ್ತರ್ ಮತೀನ್, ಈರಯ್ಯ, ಜವರಪ್ಪ, ಮುಶೀರ್ ಖಾನ್, ಅನ್ಸರ್, ರಫೀಕ್, ಅಮ್ಜದ್ ಷರೀಫ್, ಗೌಸ್ ಷರೀಫ್ ಸೇರಿದಂತೆ ಅಲ್ಪಸಂಖ್ಯಾತ ಮುಖಂಡರು ಇದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top