ಪಿರಿಯಾಪಟ್ಟಣ: ತಾಲೂಕಿನ ವಿವಿಧಡೆ 2.5 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು.

ಈ ವೇಳೆ ಶಾಸಕ ಕೆ.ಮಹದೇವ್ ಅವರು ಮಾತನಾಡಿ ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಸೋತರು ತಾಲೂಕಿನ ನಿಷ್ಠಾವಂತ ಜೆಡಿಎಸ್ ಪಕ್ಷದ ಕಾರ್ಯಕರ್ತರು ನನ್ನ ಕೈಬಿಡದೆ ಪಕ್ಷ ಸಂಘಟನೆಗೆ ಒತ್ತು ನೀಡಿ ಮೂರನೇ ಬಾರಿಗೆ ಚುನಾವಣೆಯಲ್ಲಿ ಗೆಲ್ಲಿಸಿ ಶಾಸಕನಾಗಿ ಆಯ್ಕೆ ಮಾಡಿದರು ಅವರ ಪರಿಶ್ರಮಕ್ಕೆ ಅಗೌರವ ಆಗದಂತೆ ತಾಲೂಕಿನ ಪ್ರತಿಯೊಂದು ಹಳ್ಳಿಗೂ ಪಕ್ಷಾತೀತ ಜಾತ್ಯತೀತವಾಗಿ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿಸಿದ್ದೇನೆ, ಕಾರ್ಯಕರ್ತರು ಪಕ್ಷದ ಆಸ್ತಿ ಅವರು ಚುನಾವಣೆ ವೇಳೆ ಮತದಾರರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಿದ್ದೇನೆ, ಚುನಾವಣೆ ಸಂದರ್ಭ ಕಾರ್ಯಕರ್ತರು ವೈಮನಸ್ಸು ಬಿಟ್ಟು ಸಂಘಟಿತರಾಗಿ ಮತ್ತೊಮ್ಮೆ ತಾಲೂಕಿನಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಂತೆ ಕೋರಿದರು.

ಜೆಡಿಎಸ್ ಪಕ್ಷದ ಕಾರ್ಯಾಧ್ಯಕ್ಷ ಆರ್.ಎಲ್ ಮಣಿ ಅವರು ಮಾತನಾಡಿ ಶಾಸಕರಾದ ಮೊದಲ ಅವಧಿಯಲ್ಲಿಯೇ ತಾಲೂಕಿನ ಅಭಿವೃದ್ಧಿ ಹಿತ ದೃಷ್ಟದಿಂದ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಆದ್ಯತೆ ನೀಡಿ ಸಾರ್ವಜನಿಕರು ಓಡಾಡಲು ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ರಸ್ತೆ ಕುಡಿಯುವ ನೀರು ಚರಂಡಿ ವ್ಯವಸ್ಥೆ ಸೇರಿದಂತೆ ಹಲವು ಯೋಜನೆಗಳನ್ನು ನೀಡಿರುವ ಶಾಸಕರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಮನವಿ ಮಾಡಿದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ ಅವರು ಮಾತನಾಡಿ ವಿಪಕ್ಷ ಶಾಸಕರಾಗಿದ್ದರು ತಾಲೂಕಿನ ಸಮಸ್ಯೆಗಳನ್ನು ಮನಗಂಡು ಅಭಿವೃದ್ಧಿ ಹಿತ ದೃಷ್ಟಿಯಿಂದ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿ ಹೆಚ್ಚು ಅನುದಾನ ತರುತ್ತಿರುವ ಕೆ.ಮಹದೇವ್ ಅವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಮನವಿ ಮಾಡಿದರು.

ಆರ್.ಡಿ ಕೊಪ್ಪಲು ಗ್ರಾಮದಲ್ಲಿ ನಡೆದ ಕಾರ್ಯಕ್ರಮ ವೇಳೆ ಗ್ರಾಮದ ಮುಖಂಡರಾದ  ಚಂದ್ರೇಗೌಡ, ಜಯರಾಮ್,  ಸ್ವಾಮಿ, ಗೌರೀಶ್, ಗಂಗಾಧರ್, ಪಾಪಣ್ಣ, ಸಂತೋಷ್, ಪ್ರಕಾಶ್ ಸೇರಿದಂತೆ ಹಲವರು ಶಾಸಕರ ಸಮ್ಮುಖ ಜೆಡಿಎಸ್ ಪಕ್ಷ ಸೇರಿದರು.

ಈ ವೇಳೆ ಆರ್.ಡಿ ಕೊಪ್ಪಲು, ಎಸ್.ಕೊಪ್ಪಲು ನಾಗರಘಟ್ಟ, ತಮ್ಮಡಹಳ್ಳಿ, ಎಚ್.ಬೋರೆಕೊಪ್ಪಲು, ಟಿ.ಬೋರೆಕೊಪ್ಪಲು ಗ್ರಾಮಗಳಲ್ಲಿ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹಾಗೂ ಹೊನ್ನೇನಹಳ್ಳಿ ಮಲ್ಲೇಗೌಡನ ಕೊಪ್ಪಲು ಗ್ರಾಮದಲ್ಲಿ ಜೆಜೆಎಂ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿ ಪೈಪ್ ಲೈನ್ ಅಳವಡಿಕೆ ಹಾಗೂ ಮೇಲ್ತೊಟ್ಟಿ ಕಾಮಗಾರಿ ಮತ್ತು ಆರ್.ಡಿ ಕೊಪ್ಪಲು ಗ್ರಾಮದಲ್ಲಿನ ಸರ್ಕಾರಿ ಶಾಲೆಗೆ ಹೆಚ್ಚುವರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.

ಈ ಸಂದರ್ಭ ಪುರೋಹಿತರಾದ ಹರಳಹಳ್ಳಿ ಗುರುಮಠದ ಶ್ರೀಕಂಠಾರಾದ್ಯ, ಗ್ರಾ.ಪಂ ಸದಸ್ಯ ಕುಮಾರ್, ಕಿತ್ತೂರು ದಿನೇಶ್, ದೀಪು, ಮುಖಂಡರಾದ ರಾಮಚಂದ್ರ, ರವಿ, ಕೆಂಡಗಣ್ಣ, ಶಿವರಾಧ್ಯ, ನಾಗಪ್ಪ, ಮಹದೇವ್, ಮಲ್ಲೇಶ್, ಹೊನ್ನಾಳಿಗೌಡ, ಜಿ.ಪಂ ಎಇಇ ಮಲ್ಲಿಕಾರ್ಜುನ್, ಆರ್ ಡಬ್ಲ್ಯೂಎಸ್ ಇಲಾಖೆ ಎಇಇ ಬಿ.ಸಿ ಹಿತೇಂದ್ರ, ಕಂದಾಯ ಅಧಿಕಾರಿ ಶ್ರೀಧರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಗ್ರಾಮಸ್ಥರು ಇದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top