ಪಿರಿಯಾಪಟ್ಟಣ ತಾಲೂಕಿನ ಶಾನುಭೋಗನಹಳ್ಳಿ ಗ್ರಾಮದ ತಾ.ಪಂ ಮಾಜಿ ಅಧ್ಯಕ್ಷ ಕೃಷ್ಣಪ್ಪ ಅವರು ಶಾಸಕ ಕೆ ಮಹದೇವ್ ಸಮ್ಮುಖ ಜೆಡಿಎಸ್ ಪಕ್ಷ ಸೇರಿದರು

ಪಿರಿಯಾಪಟ್ಟಣ: ತಾ.ಪಂ ಮಾಜಿ ಅಧ್ಯಕ್ಷ ಶಾನುಭೋಗನಹಳ್ಳಿ ಗ್ರಾಮದ ಕೃಷ್ಣಪ್ಪ ಅವರು ಕಾಂಗ್ರೆಸ್ ಪಕ್ಷ ತೊರೆದು ಶಾಸಕ ಕೆ.ಮಹದೇವ್ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಿದರು.

ಶಾನುಭೋಗನಹಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಪಕ್ಷ ಸೇರ್ಪಡೆಗೊಂಡ ಬಳಿಕ ಕೃಷ್ಣಪ್ಪ ಅವರು ಮಾತನಾಡಿ ಜನಪ್ರತಿನಿಧಿಗಳಾದವರಿಗೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವ ಮನಸ್ಸು ಇರಬೇಕು ಈ ನಿಟ್ಟಿನಲ್ಲಿ ಮೊದಲ ಬಾರಿಗೆ ಶಾಸಕರಾದ ಕೆ.ಮಹದೇವ್ ಅವರು ತಾಲೂಕಿನ ಯಾವುದೇ ಪ್ರದೇಶದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಅವರನ್ನು ಭೇಟಿ ಮಾಡಿದ ಸಂದರ್ಭ ಅವರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಿಕೊಡುವ ಅವರ ಪ್ರಾಮಾಣಿಕ ಕರ್ತವ್ಯವನ್ನು ಮೆಚ್ಚಿ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ ಎಂದರು.

ಶಾಸಕ ಕೆ.ಮಹದೇವ್ ಅವರು ಮಾತನಾಡಿ ಅಭಿವೃದ್ಧಿ ಕಾರ್ಯಗಳು ಹಾಗೂ ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಯಾರೇ ಜೆಡಿಎಸ್ ಪಕ್ಷ ಸೇರಿದರು ಅವರನ್ನು ನಮ್ಮ ಕಾರ್ಯಕರ್ತರಂತೆ ಸಮನಾಗಿ ಕಂಡು ಪಕ್ಷ ಸಂಘಟನೆ ಹಾಗೂ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುವುದು, ಶಾಸಕನಾದ ಬಳಿಕ ಪಕ್ಷಭೇದ ಹಾಗೂ ಜಾತಿಭೇದ ಮಾಡದೆ ಯಾರೇ ನನ್ನ ಬಳಿಗೆ ಬಂದು ಸಮಸ್ಯೆಗಳ ಪರಿಹಾರಕ್ಕೆ ಮನವಿ ಮಾಡಿದ ಸಂದರ್ಭ ಪ್ರಾಮಾಣಿಕವಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದ ತೃಪ್ತಿ ಇದೆ ಎಂದರು.

ಈ ಸಂದರ್ಭ ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ದೊಡ್ಡಕಮ್ಮರಹಳ್ಳಿ ಗ್ರಾ.ಪಂ ಅಧ್ಯಕ್ಷ ಚಂದ್ರೇಗೌಡ, ಉಪಾಧ್ಯಕ್ಷೆ ನೇತ್ರಾವತಿ, ಸದಸ್ಯರಾದ ಪುಟ್ಟಸ್ವಾಮಿಗೌಡ, ಹರೀಶ್, ಪಾರ್ವತಿ, ಜ್ಯೋತಿ, ಪುಟ್ಟಮ್ಮ, ಯಜಮಾನರಾದ ಮಲ್ಲಿಕಾರ್ಜುನ್, ಮುಖಂಡರಾದ ಬಿ.ವಿ ಗಿರೀಶ್, ರಾಜೇಶ್, ಇಂದ್ರೇಶ್, ಅಣ್ಣಯ್ಯ, ಶೇಖರ್, ಹನುಮಯ್ಯ, ನಾಗರಾಜಪ್ಪ, ದೊಡ್ಡಪ್ಪ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಇದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top