ಅಭಿವೃದ್ಧಿ ಕೆಲಸ ಮಾಡುವವರನ್ನು ಬೆಂಬಲಿಸಬೇಕು – ಕೆ.ಮಹದೇವ್

ಕುರುಬ ಸಮಾಜದವರು ಸಿದ್ದರಾಮಯ್ಯನವರ ವ್ಯಾಮೋಹಕ್ಕೆ ಒಳಗಾಗಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಮತ ಹಾಕುವುದನ್ನು ಬಿಟ್ಟು ಅಭಿವೃದ್ಧಿ ಕೆಲಸ ಮಾಡುವವರನ್ನು ಬೆಂಬಲಿಸಬೇಕು ಎಂದು ಶಾಸಕ ಕೆ ಮಹದೇವ ತಿಳಿಸಿದರು.

ಮಹದೇಶ್ವರ ಮಠದ ಕೊಪ್ಪಲು ಗ್ರಾಮದಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸಿದ್ದರಾಮಯ್ಯನವರ ಹೆಸರು ಹೇಳಿಕೊಂಡು ಮಾಜಿ ಶಾಸಕ ಕೆ ವೆಂಕಟೇಶ್ ಕುರುಬ ಸಮಾಜದ ಮತ ಪಡೆಯುತ್ತಿದ್ದರು ಈ ಸಮುದಾಯ ವಾಸಿಸುತ್ತಿರುವ ಗ್ರಾಮಗಳನ್ನು ಕಡೆಗಣಿಸುತ್ತ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ನಾನು ಶಾಸಕನಾಗಿರುವ ನಾಲ್ಕುವರೆ ವರ್ಷಗಳಲ್ಲಿ ತಾಲೂಕಿನ 300 ಗ್ರಾಮಗಳಿಗೂ ಅಗತ್ಯ ಸೌಕರ್ಯಗಳನ್ನು ನೀಡುವ ಮೂಲಕ ಜನರ ಕಷ್ಟ ಕಾರ್ಪಣ್ಯ ಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ನನ್ನನ್ನು ಮಹದೇಶ್ವರ ಮಠದ ಕೊಪ್ಪಲು ಗ್ರಾಮಸ್ಥರು ಬೆಂಬಲಿಸಿ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಟ್ಟರೆ ಈ ಗ್ರಾಮವನ್ನು ದತ್ತು ಗ್ರಾಮವಾಗಿ ಸ್ವೀಕರಿಸಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವೆ ತಾವು ಶಾಸಕರಾಗಿ ಆಯ್ಕೆಯಾದ ನಾಲ್ಕುವರೆ ವರ್ಷಗಳಲ್ಲಿ ತಾಲೂಕಿನ ಅದೆಷ್ಟೋ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ್ದು ಇನ್ನೂ ಸಾಕಷ್ಟು ಸಮಸ್ಯೆಗಳನ್ನು ಜನಸಾಮಾನ್ಯರು ಅನುಭವಿಸುತ್ತಿರುವುದು ಕಂಡುಬರುತ್ತದೆ ಎಂದರು. ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಚಂದ್ರಮೌಳಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಪಶುಪಾಲನ ಇಲಾಖೆ ಸಹಾಯಕ ನಿರ್ದೇಶಕ ಡಾಕ್ಟರ್ ಸೋಮಯ್ಯ ಲೋಕೋಪಯೋಗಿ ಇಲಾಖೆ ಎ ಇ ಇ ಕುಮಾರ್ ಬೆಟ್ಟದಪುರ ಚೆಸ್ಕಾಂ ಎಇ ಇ ಆಕಾಶ್ ಮುಖಂಡರಾದ ಅಣ್ಣಯ್ಯ ಶೆಟ್ಟಿ ಮಲ್ಲಿಕಾರ್ಜುನ್ ಗಗನ್ ದೇವರಾಜ್ ಮತ್ತಿತರರು ಹಾಜರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top