
ದೊಡ್ಡಹರವೆ ಮಂಚದೇವನಹಳ್ಳಿ ಹಿಟ್ನಹಳ್ಳಿ ಗ್ರಾಮಗಳಲ್ಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಶಾಸಕ ಕೆ.ಮಹದೇವ್ ಅವರು ಮಾತನಾಡಿ ಗ್ರಾಮಾಂತರ ಪ್ರದೇಶಗಳಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಶಾಸಕನಾದ ನನ್ನೊಬ್ಬನಿಂದ ಸಾಧ್ಯವಿಲ್ಲ ಸ್ಥಳೀಯ ಜನಪ್ರತಿನಿಗಳು ಸಹ ಸಹಕಾರ ನಿಡಬೇಕು, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ತಾಲೂಕಿನ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದಿದ್ದೇನೆ, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಯಾವುದೇ ಶಾಸಕರಿಗೂ ತಾರತಮ್ಯ ಮಾಡದೆ ಸರಿ ಸಮನಾಗಿ ಅನುದಾನ ಹಂಚಿದ್ದರು ಆದರೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ನಾನು ವಿಪಕ್ಷ ಶಾಸಕನಾಗಿರುವುದರಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ, 2008 ರಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದೊಡ್ಡಹರವೆ 1ನೇ ಬ್ಲಾಕ್ ಅಭಿವೃದ್ಧಿಗಾಗಿ 1 ಕೋಟಿಗೂ ಹೆಚ್ಚು ಅನುದಾನ ಮಂಜೂರು ಮಾಡಿಸಿದ್ದೆ ಆದರೂ ಈ ಭಾಗದ ಮತದಾರರು ಹೆಚ್ಚು ಮತ ನೀಡದ ಕಾರಣ ಚುನಾವಣೆಯಲ್ಲಿ ಪರಾಭವಗಳಿಸಿದೆ, ರಾಜಕಾರಣದಲ್ಲಿ ಯಾರೂ ಶತ್ರುಗಳೂ ಅಲ್ಲ ಮಿತ್ರರೂ ಅಲ್ಲ, ಅಧಿಕಾರ ಒಬ್ಬರಿಗೆ ಮಾತ್ರ ಶಾಶ್ವತವಾಗಿರುವುದಿಲ್ಲ, ಜನಪ್ರತಿನಿಧಿಯಾದ ಮೇಲೆ ಮತದಾರರ ವಿಶ್ವಾಸಕ್ಕೆ ಧಕ್ಕೆ ತರದಂತೆ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ ಕಾಮಗಾರಿಗಳು ದೀರ್ಘಕಾಲ ಬಾಳಿಕೆ ಬರುವಂತೆ ಗಮನಹರಿಸುವಂತೆ ಸೂಚಿಸಿದರು, ಶಾಸಕನಾಗಿ ಆಯ್ಕೆಯಾದಾಗಿನಿಂದ ಸಾರ್ವಜನಿಕ ಬದ್ಧತೆ ಇಟ್ಟುಕೊಂಡು ಪ್ರಾಮಾಣಿಕ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ಹೇಳಿದರು.
ಈ ಸಂದರ್ಭ ತಹಸೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್, ಬೈಲಕುಪ್ಪೆ ಗ್ರಾ.ಪಂ ಅಧ್ಯಕ್ಷೆ ಶಿವಮ್ಮ ಮತ್ತು ಸದಸ್ಯರು, ಪಿಡಿಒ ಬೋರೇಗೌಡ, ಪಿಡಬ್ಲ್ಯುಡಿ ಎಇಇ ಜಯಂತ್, ಜಿ.ಪಂ ಎಇಇ ಮಂಜುನಾಥ್, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಹಿಟ್ನೆಹೆಬ್ಬಾಗಿಲು ಗ್ರಾ.ಪಂ ಸದಸ್ಯೆ ಯಶೋದಮ್ಮ, ಪಿಡಿಒ ಪ್ರಶಾಂತ್, ಕಾರ್ಯದರ್ಶಿ ದಮಯಂತಿ, ಸೆಸ್ಕ್ ಎಇ ಮಣಿಕಂಠ, ಕಂದಾಯಾಧಿಕಾರಿ ಪ್ರದೀಪ್, ಗ್ರಾಮ ಲೆಕ್ಕಿಗ ನವೀನ್, ಮುಖಂಡರಾದ ಗೋವಿಂದೇಗೌಡ, ಮಹದೇವ್, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.