ಗುಲಾಮನಂತೆ ಕೆಲಸ ಮಾಡಿ  ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ  ಶಾಸಕ ಕೆ. ಮಹದೇವ್

 ಪಿರಿಯಾಪಟ್ಟಣ : ಜನರು ನನ್ನ ಮೇಲೆ ನಂಬಿಕೆಯಿಟ್ಟು ಮತ ಹಾಕಿದ್ದಾರೆ ಅವರ ನಂಬಿಕೆಗಳನ್ನು ಹುಸಿ ಮಾಡದೆ ಗುಲಾಮನಂತೆ ಕೆಲಸ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.

ಸಮೀಪದ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಸೋಮವಾರ ಸುಮಾರು ₹ 4 ಕೋಟಿ ರೂ ಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು ನಾನು ಶಾಸಕನಾಗಿದ್ದಾಗ ಗ್ರಾಮೀಣ ಪ್ರವಾಸ ಮಾಡಿರುವ ಸಂದರ್ಭದಲ್ಲಿ  ಗ್ರಾಮಾಂತರ ಭಾಗದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ಆಗಿರಲಿಲ್ಲ , ಜನರು ನಮ್ಮ ಮೇಲೆ ನಂಬಿಕೆಯಿಟ್ಟು ಆಶೀರ್ವಾದ ಮಾಡಿದ್ದಾರೆ, ಅವರ ನಂಬಿಕೆ ಆಶೋತ್ತರಗಳನ್ನು ಈಡೇರಿ ಸಬೇಕೆಂದು ಪಣತೊಟ್ಟು ಕ್ಷೇತ್ರದ ಅಭಿವೃದ್ಧಿಗೆ ಜಾತಿ ಮತ ಎನ್ನದೆ ತಾಲ್ಲೂಕಿನ ಮಗನಾಗಿ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿ ತೋರಿಸಿದ್ದೇನೆ ಎಂದು ಅವರು ಹೇಳಿದರು.

2008 ರಿಂದ 2018 ವರ್ಷದವರೆವಿಗೂ ನನಗೆ ಅತ್ಯಧಿಕವಾಗಿ ಮತ ನೀಡಿದ ಸಂಗರ ಶೆಟ್ಟಹಳ್ಳಿ ಗ್ರಾಮದ ಜನತೆಗೆ ಎಂದಿಗೂ ಋಣಿಯಾಗಿರುತ್ತೇನೆ. ಆದ್ದರಿಂದಲೇ ಈ ಗ್ರಾಮದ ರಸ್ತೆ ಅಭಿವೃದ್ಧಿಗೆ ಹೆಚ್ಚು  ಅನುದಾನವನ್ನು ಬಿಡುಗಡೆ ಮಾಡಿದ್ದೇನೆ .ಮುಂದಿನ ದಿನಗಳಲ್ಲಿ ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತೇನೆ ಎಂದು ತಿಳಿಸಿದರು.

ಮುಂಬರುವ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತ್ತೊಂದು ಅವಕಾಶ ನೀಡಿದರೆ ತಾಲ್ಲೂಕಿನ ಎಲ್ಲಾ ಕೋಮಿನ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಶಾಶ್ವತ ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಶಾಸಕ ಕೆ.ಮಹದೇವ್ ಅವರಿಗೆ ಗ್ರಾಮಸ್ಥರಿಂದ ಸನ್ಮಾನಿಸಲಾಯಿತು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವರಾಜು, ಮುಖಂಡರಾದ ಮಲ್ಲಿಕಾರ್ಜುನ್, ಪಟೇಲ್ ನಟೇಶ್, ಪ್ರೀತಿ ಅರಸ್, ಗಗನ್, ನಾಗೇಂದ್ರ ,ಮಹೇಶ್, ಪುಟ್ಟರಾಜು, ರಾಮಕೃಷ್ಣ, ಕಿತ್ತೂರು ದಿನೇಶ್, ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್, ಪಶುವೈದ್ಯಾಧಿಕಾರಿ ಸೋಮಯ್ಯ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ, ಎಇಇ ಜಯಂತ್ ಸೇರಿದಂತೆ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಇದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top